ಯಾವ ವಿಚಾರಕ್ಕೆ ಇಡಿ ದಾಳಿ ಮಾಡಿದೆ ಎಂಬುವುದು ಗೊತ್ತಿಲ್ಲ: ಪರಮೇಶ್ವರ್
ನಿನ್ನ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯದ ದಾಳಿ ನಡೆಸಿರುವ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ನಿನ್ನ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯದ ದಾಳಿ ನಡೆಸಿರುವ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ. ಯಾವ ವಿಚಾರಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಇಡಿ ಅಧಿಕಾರಿಗಳು ನಮ್ಮ ಸಂಸ್ಥೆಯ ಅಕೌಂಟ್ಸ್ ಕೇಳಿದ್ದಾರೆ. ಯಾವ ವರ್ಷದ ಲೆಕ್ಕ ಕೇಳುತ್ತಾರೆಯೋ ಅದನ್ನೆಲ್ಲ ಕೊಡಿ ಎಂದು ಸೂಚಿಸಿದ್ದೇನೆ ಎಂದರು. ನಿನ್ನೆ ಇಡಿ ದೆಹಲಿಯ ಅಧಿಕಾರಿಗಳು ನಮ್ಮ ಮೂರು ಕಾಲೇಜುಗಳಿಗೆ ಭೇಟಿ ಕೊಟ್ಟಿದ್ದಾರೆ. ಅವರಿಗೆ ಏನು ಸೂಚನೆ ಬಂದಿದೆಯೋ ಗೊತ್ತಿಲ್ಲ. ಅವರು ಕೇಳಿದ ದಾಖಲೆಗಳನ್ನು ನಾವು ಕೊಡುತ್ತೇವೆ ಎಂದು ತಿಳಿಸಿದರು. ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ. ಅವರಿಗೆ ಸಹಕಾರ ನೀಡುತ್ತೇನೆ. ನಾನು ಯಾವುದನ್ನು ಮುಚ್ಚಿಟ್ಟಿಲ್ಲ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ನಾನು ಕಾನೂನಿಗೆ ಗೌರವ ಕೊಡುತ್ತೇನೆ. ಇಡಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ಕೊಡುತ್ತೇನೆ’ ಎಂದು ಹೇಳಿದರು. ಇನ್ನು ನಮ್ಮ ಶಿಕ್ಷಣ ಸಂಸ್ಥೆಯು ಸ್ಥಾಪನೆಯಾಗಿ 68 ವರ್ಷಗಳೇ ಆಗಿವೆ. ನಮ್ಮ ತಂದೆ ಕಾಲದಿಂದಲೂ ಸಂಸ್ಥೆ ನಡೆಯುತ್ತಿದೆ. ಸಿದ್ದಾರ್ಥ ಸಂಸ್ಥೆಯಲ್ಲಿ ಕಲಿತು 40,000 ಮಂದಿ ಎಂಜಿನಿಯರ್ ಆಗಿದ್ದಾರೆ. ನಮ್ಮ ಸಂಸ್ಥೆಯ ಮೂಲಕ 10,000 ಮಂದಿ ವೈದ್ಯರಾಗಿದ್ದಾರೆ. ಜಾರಿ ನಿರ್ದೇಶನಾಲಯ ಇಲ್ಲಿಯವರೆಗೆ ಏನೂ ಹೇಳಿಲ್ಲ. ಶಫಿ ಅಹ್ಮದ್ ಅವರ ಶಿಕ್ಷಣ ಸಂಸ್ಥೆಯನ್ನೂ ಖರೀದಿ ಮಾಡಿದ್ದೇವೆ. ಸದ್ಯ ಇಡಿ ವಿಚಾರಣೆ ನಡೆಯುತ್ತಿದೆ, ಈಗ ಹೆಚ್ಚಿನದೇನನ್ನೂ ವಿವರಿಸಲು ಆಗುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.