
ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂದು ನಟ ಕಮಲ್ ಹಾಸನ್ ಅವರು ಹೇಳಿದ್ದು, ಕರವೇ ಮತ್ತು ಕನ್ನಡಪರ ಸಂಘಟನೆಗಳು ಕ್ಷಮೆಯಾಚಿಸುವಂತೆ ಪಟ್ಟು ಹಿಡಿದಿವೆ.. ಮೈಸೂರಿನಲ್ಲಿ ಕಮಲ ಹಾಸನ್ ವಿರುದ್ಧ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದ್ದು. ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕಮಲ್ ಹಾಸನ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಮಲ್ ಹಾಸನ್ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಪಕ್ಕದಲ್ಲೇ ಕುಳಿತಿದ್ದ ಶಿವರಾಜ್ ಕುಮಾರ್ ಅವರು ಕೂಡ ಇದರ ಬಗ್ಗೆ ಮಾತನಾಡಿಲ್ಲ. ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಕನ್ನಡದಲ್ಲಿ 52 ಅಕ್ಷರಗಳಿವೆ ಆದರೆ ತಮಿಳಿನಲ್ಲಿ ಕೇವಲ 18 ಅಕ್ಷರಗಳಿವೆ. ಕನ್ನಡ ತನ್ನದೇ ಆದ ಇತಿಹಾಸ ಹೊಂದಿದೆ. ನಿಮ್ಮ ತಮಿಳಿನಿಂದ ನಮ್ಮ ಕನ್ನಡ ಹುಟ್ಟಿಲ್ಲ. ಈ ಕೂಡಲೇ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲ ಅಂದರೆ ಅವರ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಪ್ರತಿಭಟನಾಕಾರರ ಎಚ್ಚರಿಕೆ ನೀಡಿದ್ದಾರೆ.
ಇನ್ನು ಬೆಳಗಾವಿ ನಗರದ ಐನಾಕ್ಸ್ ಚಿತ್ರ ಮಂದಿರದ ಬಳಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಸಿದ ಹೋರಾಟಗಾರರು. ‘ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಕಮಲ್ ಹಾಸನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಥಗ್ ಲೈಫ್ ಚಿತ್ರದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಶಿವರಾಜ್ಕುಮಾರ್ ಅತಿಥಿಯಾಗಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡುವಾಗ ಕಮಲ್ ಹಾಸನ್ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದು ಹೇಳಿದ್ದರು. ನಟ ಶಿವರಾಜ್ ಕುಮಾರ್ ಕೂಡ ಈ ವೇಳೆ ವೇದಿಕೆ ಮೇಲೆ ಇದ್ದರು. ಇದೀಗ ನಟ ಕಮಲ್ ಹಾಸನ್ ಹೇಳಿಕೆಗೆ ಎಲ್ಲಡೆ ಟೀಕೆ ವ್ಯಕ್ತವಾಗುತ್ತಿದ್ದು. ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ಸಿನಿಮಾ ಬಿಡುಗಡೆಯಾಗಲು ಬಿಡವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.