
ಮೈಸೂರು: ನಗರದ ಕೆ.ಆರ್ ವೃತ್ತದಲ್ಲಿ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಬಳಿ ಕುಳಿತು ಹುಚ್ಚಾಟ ಮೇರೆದಿದ್ದಾನೆ. ನಾಲ್ವಡಿ ಪ್ರತಿಮೆ ಬಾಯಿಗೆ ಬಿಡಿ ಇಟ್ಟು ವಿಕೃತಿ ಮೇರೆದಿದ್ದು, ಮೈಸೂರಿನ ಹೃದಯ ಭಾಗದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯ ಉಚ್ಚಾಟ ಕಂಡು ಜನರು ಕೆಲಕಾಲ ಗಾಬರಿ ಗೊಂಡಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಗೆ ಸೂಕ್ತ ರಕ್ಷಣೆ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ನಾಲ್ವಡಿಯವರ ಬಾಯಿಗೆ ಬೀಡಿ ಇಟ್ಟು, ಅವರ ಮೇಲೆ ಕುಳಿತಿದ್ದನ್ನು ಕಂಡು ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದರು. ಆದರೆ, ಪೊಲೀಸರು ಬರುವಷ್ಟರಲ್ಲಿ ಆತ ಅಲ್ಲಿಂದ ಓಡಿಹೋಗಿದ್ದಾನೆ. ಈತನ ಹುಚ್ಚಾಟದ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ವ್ಯವಸ್ಥೆಯ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೃತ್ಯವೇಸಗಿ ಪರಾರಿಯಾಗಿರುವ ವ್ಯಕ್ತಿಗಾಗಿ ದೇವರಾಜ ಪೊಲೀಸ್ ಠಾಣೆ ಪೊಲೀಸರು ಹುಡುಕಾಟ ನಡೆಸಿತಿದ್ದಾರೆ.