ಕರ್ನಾಟಕHomeಜಿಲ್ಲೆಮೈಸೂರುಸುದ್ದಿ

ಮೈಸೂರಿನಲ್ಲಿ ನಾಲ್ವಡಿ ಪ್ರತಿಮೆ ಬಳಿ ಕುಡುಕನ ಹುಚ್ಚಾಟ

ನಗರದ ಕೆ.ಆರ್‌ ವೃತ್ತದಲ್ಲಿ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ.

ಮೈಸೂರು: ನಗರದ ಕೆ.ಆರ್‌ ವೃತ್ತದಲ್ಲಿ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಪ್ರತಿಮೆ ಬಳಿ ಕುಳಿತು ಹುಚ್ಚಾಟ ಮೇರೆದಿದ್ದಾನೆ. ನಾಲ್ವಡಿ ಪ್ರತಿಮೆ ಬಾಯಿಗೆ ಬಿಡಿ ಇಟ್ಟು ವಿಕೃತಿ ಮೇರೆದಿದ್ದು, ಮೈಸೂರಿನ ಹೃದಯ ಭಾಗದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯ ಉಚ್ಚಾಟ ಕಂಡು ಜನರು ಕೆಲಕಾಲ ಗಾಬರಿ ಗೊಂಡಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಗೆ ಸೂಕ್ತ ರಕ್ಷಣೆ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ನಾಲ್ವಡಿಯವರ ಬಾಯಿಗೆ ಬೀಡಿ ಇಟ್ಟು, ಅವರ ಮೇಲೆ ಕುಳಿತಿದ್ದನ್ನು ಕಂಡು ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದರು. ಆದರೆ, ಪೊಲೀಸರು ಬರುವಷ್ಟರಲ್ಲಿ ಆತ ಅಲ್ಲಿಂದ ಓಡಿಹೋಗಿದ್ದಾನೆ. ಈತನ ಹುಚ್ಚಾಟದ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ವ್ಯವಸ್ಥೆಯ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೃತ್ಯವೇಸಗಿ ಪರಾರಿಯಾಗಿರುವ ವ್ಯಕ್ತಿಗಾಗಿ ದೇವರಾಜ ಪೊಲೀಸ್‌ ಠಾಣೆ ಪೊಲೀಸರು ಹುಡುಕಾಟ ನಡೆಸಿತಿದ್ದಾರೆ.

 

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker