
ಮಂಡ್ಯ: ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಕಂದಮ್ಮ ಬಲಿಯಾಗಿರುವ ವಿಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಮಗು ಸಾವಿನ ದುರಂತ ನಡೆದಿದೆ. ಪೊಲೀಸರಿಂದ ಮಗು ಸಾವಾಗಿದೆ ನಮ್ಮ ಶತ್ರುಗಳಿಗೂ ಆ ಪರಿಸ್ಥಿತಿ ಬರಬಾರದು. ಮೃತ ಮಗು ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ರಾಜ್ಯದ ಮುಖ್ಯಮಂತ್ರಿಗಳು ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚಿಸುತ್ತಿದ್ದಾರೆ. ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ. ಬಡವರಿಗೆ ಕೇಂದ್ರದ ಯೋಜನೆ ತಲುಪಬಾರದು ಎಂದು ಹೇಳಿ ಕೆಟ್ಟ ರಾಜಕಾರಣ ಮಾಡುತ್ತಿದೆ ಎಂದು ಹೇಳಿದರು.
ಆಸ್ಪತ್ರೆಯಲ್ಲಿ ನಾಯಿ ಕಚ್ಚಿರುವುದಕ್ಕೆ ಔಷಧ ಇಲ್ಲ. ರಾಜ್ಯದ ಸರ್ಕಾರಿ ಆಸ್ಪತ್ರೆಯ ಸ್ಥಿತಿ ಹೇಗಿದೆ. ಪೊಲೀಸರಿಗೆ ರಾಜ್ಯ ಸರ್ಕಾರ ಒತ್ತಡ ನೀಡುತ್ತಿದೆ. ಗ್ಯಾರಂಟಿ ಹಣಕ್ಕಾಗಿ ಎಲ್ಲಾ ಇಲಾಖೆಗೆ ರಾಜ್ಯ ಸರ್ಕಾರ ಟಾರ್ಗೆಟ್ ನೀಡಿದೆ. ಹಣ ಸಂಗ್ರಹ ಎಲ್ಲಾ ಕಡೆ ನಡೆಯುತ್ತಿದೆ. ರಾಜ್ಯದಲ್ಲಿ ಆಸ್ಪತ್ರೆಯ ಪರಿಸ್ಥಿತಿ ಬಗ್ಗೆ ಆರೋಗ್ಯ ಸಚಿವರು ಗಮನಿಸಬೇಕು ಎಂದರು.