
ಇಂದು ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮೊದಲ ಐಪಿಎಲ್ ಟ್ರೋಫಿಗಾಗಿ ಕಾದಾಡಲಿವೆ. ಪಂದ್ಯಕ್ಕಾಗಿ ಕೋಟಿ ಕೋಟಿ ಅಭಿಮಾನಿಗಳು ಕಾತರದಿಂದ ಇದ್ದಾರೆ. ಇದು ಈಗಿರುವಾಗಲೇ ಫೈನಲ್ ಪಂದ್ಯದ ಸಂಭ್ರಮಾಚರಣೆ ಹೆಸರಲ್ಲಿ ಅಭಿಮಾನಿಗಳು ಹದ್ದುಮೀರಿ ವರ್ತಿಸಿದರೆ ಪೊಲೀಸರು ಪ್ರಕರಣ ದಾಖಲಿಸುತ್ತಾರೆ.
ಆರ್ಸಿಬಿ ಹಾಗೂ ಪಂಜಾಬ್ ನಡುವಿನ ಪಂದ್ಯ ಗುಜರಾತ್ನಲ್ಲಿ ನಡೆದರೂ ಬೆಂಗಳೂರಿನಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಹೆಸರಲ್ಲಿ ಹದ್ದುಮೀರಿ ವರ್ತಿಸುವಂತೆ ಇಲ್ಲ. ಪಂದ್ಯದ ಹೆಸರಲ್ಲಿ ಉದ್ಧಟತನ ತೋರಿಸಬಾರದು. ಅಭಿಮಾನಿಗಳ ಸಂಭ್ರಮಾಚರಣೆ ಕಾನೂನಿನ ಚೌಕಟ್ಟಿನಲ್ಲಿ ಇರಬೇಕು. ಅತಿರೇಕದಿಂದ ವರ್ತನೆ ಮಾಡಿದರೆ ಪೊಲೀಸರು ಪ್ರಕರಣ ದಾಖಲು ಮಾಡಲು ಸಿದ್ಧತೆ ನಡೆಸಿದ್ದಾರೆ.
ಬೆಂಗಳೂರಿನ ಪಬ್ಗಳು, ಕ್ಲಬ್ಗಳು ಮತ್ತು ಪ್ರತಿಷ್ಠಿತ ಹೋಟೆಲ್ಗಳಿಗೆ ರಾತ್ರಿಯ ವೇಳೆ ನಿಗದಿತ ಅವಧಿಯನ್ನು ಮೀರಿ ತೆರೆದಿರುವಂತಿಲ್ಲ ಎಂದು ಪೊಲೀಸರು ಸೂಚನೆ ನೀಡಿದ್ದಾರೆ. ಇದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ತಪ್ಪಿದ್ದಲ್ಲ. ಈ ಕ್ರಮವು ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು-ಸುವ್ಯವಸ್ಥೆಯನ್ನು ಕಾಪಾಡಲು ತೆಗೆದುಕೊಳ್ಳಲಾಗಿದೆ.