ಕ್ರೀಡೆHomeಕರ್ನಾಟಕಜಿಲ್ಲೆದೇಶಸುದ್ದಿ

ಆರ್‌ಸಿಬಿ ತಂಡ ಕಪ್‌ ಗೆದ್ದು ಕರ್ನಾಟಕಕ್ಕೆ ಗೌರವ ತಂದಿದ್ದಾರೆ-ಡಿ.ಕೆ ಶಿವಕುಮಾರ್

‌ಈ ಸಲ ಕಪ್​ ನಮ್ದೆ ಟು ಈ ಸಲ ಕಪ್​ ನಮ್ದು ಆಗಿದೆ. ಕಳೆದ 18 ವರ್ಷಗಳಿಂದ ಆರ್​ಸಿಬಿ ಅಭಿಮಾನಿಗಳು ಕಾಣುತ್ತಿದ್ದ ಕನಸು ನಿನ್ನೆ ನನಸಾಗಿದೆ.

‌ಈ ಸಲ ಕಪ್​ ನಮ್ದೆ ಟು ಈ ಸಲ ಕಪ್​ ನಮ್ದು ಆಗಿದೆ. ಕಳೆದ 18 ವರ್ಷಗಳಿಂದ ಆರ್​ಸಿಬಿ ಅಭಿಮಾನಿಗಳು ಕಾಣುತ್ತಿದ್ದ ಕನಸು ನಿನ್ನೆ ನನಸಾಗಿದೆ. ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದಿದ್ದ ಫೈನಲ್​ ಪಂದ್ಯದಲ್ಲಿ ಬೆಂಗಳೂರು ತಂಡ 6 ರನ್​ಗಳಿಂದ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಚೊಚ್ಚಲ ಐಪಿಎಲ್​ ಟ್ರೋಫಿಯನ್ನು ಗೆದ್ದುಕೊಂಡಿದೆ.

ಇನ್ನು ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಮಣಿಸಿ ಕಪ್ ಗೆದ್ದ ಆರ್‌ಸಿಬಿ ತಂಡದ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಆರ್‌ಸಿಬಿ ತಂಡವನ್ನು ನಾವು ಗೌರವಿಸಬೇಕು. ಯಾವ ರೀತಿ ಅವರನ್ನು ಗೌರವಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಟ್ರಾಫಿಕ್‌ಗೂ ಸಮಸ್ಯೆ ಆಗಬಾರದು, ಸಾಕಷ್ಟು ಯುವಕರು ಭಾಗವಹಿಸುತ್ತಾರೆ ಎಂದರು. ಅವರು ಶೆಡ್ಯೂಲ್ ಹಾಕಿಕೊಳ್ಳುತ್ತಾರೆ. ಆದರೆ ಕಂಟ್ರೋಲ್ ಮಾಡೋದು ನಾವು. ಗೃಹ ಸಚಿವರು, ಪೊಲೀಸ್ ಕಮೀಷನರ್ ಎಲ್ಲಾ ಕೂತು ಮಾತನಾಡಿ ಈ ಬಗ್ಗೆ ನಿರ್ಧಾರ ಮಾಡುತ್ತಾರೆ. ನಾನು ಕೂಡ ಸಂಪೂರ್ಣ ಮ್ಯಾಚ್ ನೋಡಿದ್ದೇನೆ. ಆರ್‌ಸಿಬಿ ಟೀಂ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರಿಗೆ ಸನ್ಮಾನ ಮಾಡುವ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ಹೇಳಿದ್ದಾರೆ..

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker