
ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಂಡ್ಯ ಜಿಲ್ಲೆಯ ಮದ್ದೂರಿನ ನಿಡಘಟ್ಟ ಬಳಿ ಎರಡು ಕಾರುಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಕಳೆದ ರಾತ್ರಿ ಘಟನೆ ನಡೆದಿದ್ದು, ಬೆಂಗಳೂರು ಮೂಲದ ಮಸೂದ್, ಅಯಾನ್ ಪ್ರಾಣ ಕಳೆದುಕೊಂಡವರು. ಇನ್ನುಳಿದ ನಾಲ್ವರಿಗೆ ಗಂಭೀರ ಗಾಯವಾಗಿದೆ. ಖುಷಿ, ಚಿಕ್ಕು, ಮುಜಾಯಿದ್ ಪಾಷಾ, ಬಸವರಾಜು, ಪಾರ್ವತಿ ಅನ್ನೋರಿಗೆ ಗಂಭೀರ ಗಾಯವಾಗಿದೆ.
ಕೆಲವರಿಗೆ ಬೆಂಗಳೂರು ಹಾಗೂ ಮೈಸೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಬೆಂಗಳೂರಿನಿಂದ ಬರುತ್ತಿದ್ದ ಕಾರು ಡಿವೈಡರ್ ದಾಟಿ ಮಂಡ್ಯ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಅತಿವೇಗ ಮತ್ತು ಅಜಾಗರೂಕತೆ ಚಾಲನೆಯಿಂದ ಅಪಘಾತಕ್ಕೆ ಕಾರಣವಾಗಿದ್ದು, ಹೈವೇಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹೈವೇ ಬಂದ್ ಮಾಡಿ ಸರ್ವೀಸ್ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ.