
ಬಳ್ಳಾರಿ: ವಾಲ್ಮೀಕಿ ನಿಗಮದ ಹಗರಣದ ಹಣವನ್ನು ಬಳ್ಳಾರಿ ಚುನಾವಣೆಗೆ ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪದ ಮೇಲೆ ಇ.ಡಿ ಅಧಿಕಾರಿಗಳು ಬಳ್ಳಾರಿಯ ಎಂಟು ಕಡೆ ದಾಳಿ ಮಾಡಿ ಶಾಕ್ ನೀಡಿದ್ದಾರೆ.. ಸುಮಾರು 60 ಅಧಿಕಾರಿಗಳು ಶಾಸಕರಾದ ಕಂಪ್ಲಿ ಗಣೇಶ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಬಳ್ಳಾರಿ ಸಂಸದ ಇ.ತುಕಾರಾಂ ಮನೆಗಳ ಮೇಲೆ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ನಿಗಮದ ಹಣ ಬಳಸಿಕೊಂಡು ಸಂಸದ ತುಕಾರಾಂ ಗೆದ್ದಿದ್ದಾರೆ ಎನ್ನುವ ಆರೋಪ ಇತ್ತು. ಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಲು ಒಂದೊಂದು ವಿಧಾನಸಭೆ ಶಾಸಕರಿಗೆ ಎಂಟರಿಂದ ಹತ್ತು ಕೋಟಿ ಕೊಟ್ಟಿದ್ದಾರೆ ಎನ್ನುವ ಆರೋಪ ಇತ್ತು