ಸುದ್ದಿಕರ್ನಾಟಕಕ್ರೀಡೆದೇಶ

RCB ಆಟಗಾರರ ಸನ್ಮಾನ‌ಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿದ್ದು ನಾನೇ- ಸಿದ್ದರಾಮಯ್ಯ

ಆರ್‌ಸಿಬಿ ಆಟಗಾರರ ಅಭಿನಂದನಾ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಗೌರಿಬಿದನೂರು: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಜೂನ್‌ 4, 5025 ರಂದು ಹಮ್ಮಿಕೊಂಡ ಆರ್‌ಸಿಬಿ ಆಟಗಾರರ ಅಭಿನಂದನಾ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಗೌರಿಬಿದನೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಪಾಲರು ತಾವಾಗಿಯೇ ಬರಲಿಲ್ಲ, ಆಹ್ವಾನ ನೀಡಲಾಗಿತ್ತು ಎಂದು ತಿಳಿಸಿದರು. ಜೂನ್ 4ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್‌ಸಿಬಿ ವತಿಯಿಂದ, ಆರ್‌ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29ಕ್ಕೆ ಕೆಎಸ್‌ಸಿಎ ವತಿಯಿಂದ ಶಂಕರ್ ಮತ್ತು ಜಯರಾಮ್ ಆಹ್ವಾನ ನೀಡಿ ಮನವಿ ಮಾಡಿಕೊಂಡರು. ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವು ಬನ್ನಿ ಎಂದು ಆಹ್ವಾನಿಸಿದೆ ಎಂದರು. ರಾಜ್ಯಪಾಲರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದರು. ಸನ್ಮಾನ ಕಾರ್ಯಕ್ರಮ 20 ನಿಮಿಷಗಳಲ್ಲಿ ಮುಗಿದುಹೋಯಿತು ಎಂದರು. ಮಾಧ್ಯಮಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂದು ವರದಿಯಾದ್ದರಿಂದ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದರು.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker