
ಬೆಂಗಳೂರು: ಪತ್ನಿಯ ಆಗ್ಗಾಗ ಮನೆ ಬಿಟ್ಟು ಹೋಗುವ ಚಟದಿಂದ ಬೇಸತ್ತ ಗಂಡ ನೇಣಿಗೆ ಶರಣಾಗಿರುವ ಘಟನೆ, ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋವರ್ಧನ್ ನೇಣಿಗೆ ಶರಣಾದ ವ್ಯಕ್ತಿ. ಗೋವರ್ಧನ್ ಮತ್ತು ಪ್ರಿಯಾ ಕಳೆದ 7 ವರ್ಷದ ಹಿಂದೆ ಮದುವೆಯಾಗಿದ್ದು, ಈ ಜೋಡಿಗೆ ಇಬ್ಬರು ಮಕ್ಕಳು.. ಬೆಂಗಳೂರಿನ ಕೆ.ಪಿ ಅಗ್ರಹಾರದಲ್ಲಿರುವ 12ನೇ ಕ್ರಾಸ್ನಲ್ಲಿರುವ ಸ್ವಂತ ಮನೆಯಲ್ಲಿ ವಾಸವಾಗಿದ್ರು.
ಮನೆಯಲ್ಲಿ ಗಲಾಟೆ ಮಾಡ್ತಿದ್ದ ಪತ್ನಿ ಪದೇ ಪದೇ ತನ್ನ ತವರು ಮನೆಗೆ ಹೋಗ್ತಿದ್ದಳಂತೆ.. ಅದೇ ರೀತಿ ಒಂದು ತಿಂಗಳ ಹಿಂದೆ ಕೂಡ ಗಲಾಟೆ ಆಗಿ ಪತ್ನಿ ಮನೆ ಬಿಟ್ಟು ತವರು ಮನೆ ಸೇರಿದ್ದಳು. ಇಬ್ಬರು ಮಕ್ಕಳನ್ನು ತನ್ನ ಜೊತೆಗೆ ಕರೆದುಕೊಂಡು ಹೋಗಿದ್ಳು. ಅದೇ ನೋವಿನಲ್ಲಿದ್ದ ಗೋವರ್ಧನ್ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ. ಕೆಲಸ ಮುಗಿಸಿ ಬಂದವನಿಗೆ ಸಂಜೆ ತಾಯಿ ಅಡುಗೆ ಮಾಡಿ ತಟ್ಟೆಯಲ್ಲಿ ಅನ್ನ ಹಾಕಿ ಕೊಟ್ಟಿದ್ರು. ಊಟ ಕೂಡ ಮಾಡದೇ ಆತ, ಫ್ಯಾನಿಗೆ ನೇಣು ಬಿಗಿದುಕೊಂಡು ಜೀವ ತೆಗೆದುಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.