
ಇತ್ತೀಚೆಗೆ ತಮ್ಮ ಮುಂದಿನ ಚಿತ್ರ ಥಗ್ ಲೈಫ್ನ ಪ್ರಚಾರ ಕಾರ್ಯಕ್ರಮದಲ್ಲಿ ಕನ್ನಡ ತಮಿಳಿನಿಂದ ಹುಟ್ಟಿತು ಎಂದು ನಟ ಕಮಲ್ ಹಾಸನ್ ನೀಡಿದ ಹೇಳಿಕೆ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಕನ್ನಡಿಗರ ತೀವ್ರ ಆಕ್ರೋಶದ ಬಳಿಕವೂ ನಟ ಕಮಲ್ ಹಾಸನ್ ಕ್ಷಮೆ ಕೇಳಲು ನಿರಾಕರಿಸಿದ್ದಾರೆ. ನಾನು ತಪ್ಪು ಮಾಡಿದ್ದರೆ ಮಾತ್ರ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ. ನಾನು ತಪ್ಪು ಮಾಡಿದ್ದರೆ ಕ್ಷಮೆಯಾಚಿಸುತ್ತೇನೆ, ನನ್ನ ತಪ್ಪಿಲ್ಲದ್ದರೆ ನಾನು ಕ್ಷಮೆ ಕೇಳುವುದಿಲ್ಲ. ಇದು ನನ್ನ ಜೀವನಶೈಲಿ, ದಯವಿಟ್ಟು ಅದನ್ನು ಹಾಳು ಮಾಡಬೇಡಿ ಎಂದು ನಟ ಕಮಲ್ ಹಾಸನ್ ಹೇಳಿದ್ದಾರೆ.
ಭಾರತವು ಪ್ರಜಾಪ್ರಭುತ್ವ ರಾಷ್ಟ್ರ, ನಾಣು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ ಎಂದು ಹೇಳಿದ್ದಾರೆ. ಇನ್ನು ಕಮಲ್ ಹಾಸನ್ ಅವರು ಶುಕ್ರವಾರದೊಳಗೆ ಸಾರ್ವಜನಿಕ ಕ್ಷಮೆಯಾಚಿಸದಿದ್ದರೆ ಕರ್ನಾಟಕದಲ್ಲಿ ಥಗ್ ಲೈಫ್ ಚಿತ್ರವನ್ನು ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಘೋಷಿಸಿದೆ.