ಕರ್ನಾಟಕಜಿಲ್ಲೆಸುದ್ದಿ

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ- ರಾಮಲಿಂಗಾರೆಡ್ಡಿ

ಬೆಂಗಳೂರು: ಆಗಸ್ಟ್‌ 15 ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ .. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಪ್ಲಾಸ್ಟಿಕ್‌ ಮುಕ್ತ ದೇವಾಲಯ ಪ್ರಾರಂಭ ಮಾಡುತ್ತಿದ್ದೇವೆ.

ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಸೂಚಿಸಿದರು. ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್‌ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು. ಮುಜರಾಯಿ ವ್ಯಾಪ್ತಿಯ ದೇವಾಲಯಗಳ ಮಾಹಿತಿಯನ್ನು 3 ತಿಂಗಳ ಒಳಗೆ ಕೊಡಬೇಕು. 3 ತಿಂಗಳ ಒಳಗೆ ಬಾಕಿ ಇರುವ 20 ಸಾವಿರ ಎಕರೆ ದೇವಾಲಯ ಜಮೀನು ಇಂಡೀಕರಣ ಆಗಬೇಕು ಎಂದು ಹೇಳಿದ್ದರು.

 

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker