
ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಪತಿ ಮನಸೋ ಇಚ್ಛೆ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ನಲ್ಲಿ ನಡೆದಿದೆ. ಕೀರ್ತಿ (26) ಮೃತ ದುರ್ದೈವಿ.
ಇನ್ನು ಪತಿ ಅವಿನಾಶ್ (32) ಎನ್ನುವಾತ ಚಾಕುವಿನಿಂದ ಬರೋಬ್ಬರಿ ಹತ್ತು ಬಾರಿ ಚುಚ್ಚಿ ಕೊಂದು ಎಸ್ಕೇಪ್ ಆಗಿದ್ದಾನೆ. ಕೀರ್ತಿ ಪೋಷಕರ ವಿರೋಧದ ನಡುವೆಯೂ ಆಕೆಯನ್ನು ನಾಲ್ಕು ವರ್ಷದ ಹಿಂದೆಯೇ ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಇಬ್ಬರು ನಡುವೆ ಶುರುವಾದ ಸಣ್ಣ ಜಗಳದಲ್ಲಿ ಅವಿನಾಶ್, ಪ್ರೀತಿ ನಂಬಿ ಬಂದಿದ್ದ ಕೀರ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಕೀರ್ತಿ ಹಾಗೂ ಅವಿನಾಶ್ ಪರಸ್ಪರ ಪ್ರೀತಿಸಿದ್ದು, ನಾಲ್ಕು ವರ್ಷದ ಹಿಂದೆಷ್ಟೇ ಮದುವೆಯಾಗಿದ್ದು, ದಂಪತಿಗೆ ಎರಡೂವರೆ ವರ್ಷದ ಹೆಣ್ಣು ಮಗುವಿದೆ. ಇಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಅವಿನಾಶ್, ಪತ್ನಿ ಕೀರ್ತಿಗೆ ಚಾಕುವಿನಿಂದ ಮನಸ್ಸೋ ಇಚ್ಛೇ ದಾಳಿ ಮಾಡಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮಾಡಿ ಪರಾರಿಯಾಗಿರುವ ಅವಿನಾಶ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.