
ಕರ್ನಾಡಕದಲ್ಲಿ ಕೊರೋನಾ ಹೆಮ್ಮಾರಿ ಸದ್ದಿಲ್ಲದೇ ಆರ್ಭಟಿಸುತ್ತಿದೆ.. SARI ಗುಣಲಕ್ಷಣ ಹೊಂದಿರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಮುಂಗಾರಿನ ಎಂಟ್ರಿ ಆಗಿರೋದರಿಂದ ಕೋವಿಡ್ ಸೋಂಕು ವೇಗವಾಗಿ ಹರಡೋಕೆ ಶುರುವಾಗಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 200ರ ಗಡಿ ದಾಟಿದ್ದು, ಆತಂಕ ಮೂಡಿಸಿದೆ. ನಿನ್ನೆ ಮೈಸೂರಲ್ಲಿ 63 ವರ್ಷ ಪುರುಷ ಕೊವಿಡ್ ಗೆ ಬಲಿಯಾಗಿದ್ದು, ಕೊರೋನಾ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಕೊವಿಡ್ ಪ್ರಕರಣಗಳು ಹೆಚ್ಚಳ ಹಿನ್ನೆಲೆಯಲ್ಲಿ ಕೊವಿಡ್ ಪರೀಕ್ಷೆ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಐಸೋಲೇಷನ್ ವಾರ್ಡ್ ಸಿದ್ಧಪಡಿಸಲಾಗಿದೆ. ಕೊರೊನಾ 2ನೇ ಅಲೆಯಲ್ಲಿ ಅತಿ ಹೆಚ್ಚು ಮರಣ ಪ್ರಮಾಣದ ಅಪಖ್ಯಾತಿ ಹೊಂದಿರುವ ಹಾವೇರಿ ಜಿಲ್ಲೆ. ಈ ಬಾರಿ ಕೊರೊನಾ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸಿದ್ಧತೆ ನಡೆಸಿದೆ.