
IPL ಸೀಸನ್ 18ರ ಚಾಂಪಿಯನ್ RCB ತಂಡ ಕಪ್ ಗೆದ್ದು ಬೆಂಗಳೂರಿಗೆ ಮರಳಿದೆ. ತವರಿಗೆ ಬಂದ RCB ಆಟಗಾರರನ್ನ ಫ್ಯಾನ್ಸ್ ಭರ್ಜರಿಯಾಗಿ ಬರಮಾಡಿಕೊಂಡಿದ್ದಾರೆ. ಅಭಿಮಾನಿಗಳ ಸಾಗರ ನೋಡಿ ಪ್ರತಿಯೊಬ್ಬರು ಫುಲ್ ಫಿದಾ ಆಗಿದ್ದಾರೆ.
ಬೆಂಗಳೂರಿಗೆ ಬಂದಿಳಿದ ಆರ್ಸಿಬಿ ತಂಡವು ಹೆಚ್ಎಎಲ್ನಿಂದ ತಾಜ್ ವೆಸ್ಟೆಂಡ್ ಹೋಟೆಲ್ಗೆ ತೆರಳುತ್ತಿದ್ದ ವೇಳೆ ಅಭಿಮಾನಿಗಳನ್ನು ಕಂಡ ವಿರಾಟ್ ಕೊಹ್ಲಿ, ಚಾಂಪಿಯನ್ ಟ್ರೋಫಿಯನ್ನು ತೋರಿಸಿ ಸಂತಸಪಟ್ಟರು.
ಆರ್ಸಿಬಿ ತಂಡದ ಆಟಗಾರರಿಗೆ ಹೆಎಎಲ್ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತ ಕೋರಿದರು.
ಈ ವೇಳೆ, ಆರ್ಸಿಬಿ ಸ್ಟಾರ್ ವಿರಾಟ್ ಕೊಹ್ಲಿಗೆ ಕನ್ನಡದ ಬಾವುಟ ನೀಡಿದರು. ಕನ್ನಡ ಧ್ವಜ ಹಾರಿಸುವ ಮೂಲಕ ವಿರಾಟ್ ಖುಷಿಪಟ್ಟರು.