ಸಾಲಭಾದೆ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಕಾರಣವಾಯ್ತ?

ಹರಿಯಾಣ: ಸಾಲಬಾಧೆಗೆ ಒಂದೇ ಕುಟುಂಬದ 7 ಮಂದಿ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ. ಈ ದುರಂತಕ್ಕೆ ಕುಟುಂಬದ ಮೇಲಿನ ಭಾರೀ ಸಾಲದ ಹೊರೆ ಮತ್ತು ಆರ್ಥಿಕ ಸಂಕಷ್ಟ ಕಾರಣವೆಂದು ಪೊಲೀಸರ ಮಾಹಿತಿಯಿಂದ ತಿಳಿದುಬಂದಿದೆ.
ಇನ್ನು ಘಟನೆ ತಿಳಿದ ತಕ್ಷಣ, ಡಿಪಿ ಹಿಮಾದ್ರಿ ಕೌಶಿಕ್ ಮತ್ತು ಸ್ಥಳೀಯ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಏಳು ಜನರನ್ನು ತಕ್ಷಣವೇ ಸೆಕ್ಟರ್ 26 ರಲ್ಲಿರುವ ಓಜಾಸ್ ಆಸ್ಪತ್ರೆಗೆ ಕರೆತಂದಿದ್ದಾರೆ ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಎಲ್ಲ ಏಳು ಮಂದಿಯೂ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮೃತರೆಲ್ಲರೂ ಡೆಹ್ರಾಡೂನ್ ನಿವಾಸಿಗಳು ಎಂದು ತಿಳಿದುಬಂದಿದ್ದು ಮೃತರಲ್ಲಿ ಪ್ರವೀಣ್ ಮಿತ್ತಲ್, ಅವರ ತಂದೆ ದೇಶರಾಜ್ ಮಿತ್ತಲ್, ತಾಯಿ ಮತ್ತು ಪತ್ನಿ ಹಾಗೂ ಮೂವರು ಮಕ್ಕಳು ಸೇರಿದ್ದಾರೆ. ಆರು ಮಂದಿ ಕಾರಿನೊಳಗೆ ವಿಷ ಸೇವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಈ ವೇಳೆ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಅವರನ್ನು ರಕ್ಷಣೆ ಮಾಡುತ್ತಿರುವ ವೇಳೆ ಓರ್ವ ಮನೆಯ ಒಳಗಿಂದ ಅಸ್ವಸ್ಥಗೊಂಡು ಮನೆಯ ಹೊರಗೆ ಬಂದಿದ್ದು ಅವರನ್ನು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಅಲ್ಲದೆ ಕಾರಿನಲ್ಲಿದ್ದ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಪರಿಶೀಲಿಸಿದ ವೈದ್ಯರು ಎಲ್ಲರೂ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಪೊಲೀಸರ ಆರಂಭಿಕ ತನಿಖೆಯಲ್ಲಿ ಈ ಕುಟುಂಬವು ಮೂಲತಃ ಉತ್ತರಾಖಂಡದವರಾಗಿದ್ದು, ಪಂಚಕುಲದಲ್ಲಿ ಬಾಡಿಗೆ ಮನೆಯಲ್ಲಿ ದೀರ್ಘಕಾಲ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.