
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಭೇಟಿ ನೀಡಿರುವ ಉದ್ದೇಶ ನನಗೆ ತಿಳಿದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಹಾಗೂ ಡಿಸಿಎಂ ದೆಹಲಿಗೆ ಭೇಟಿ ನೀಡಿದ್ದು, ಈ ಭೇಟಿ ಉದ್ದೇಶ ನನಗೆ ತಿಳಿದಿಲ್ಲ.
ಬೆಂಗಳೂರು ಕಾಲ್ತುಳಿತ ಘಟನೆ ಬಗ್ಗೆ ಹೈಕಮಾಂಡ್’ಗೆ ಮಾಹಿತಿ ನೀಡಲು ಹೋಗಿರಬಹುದು. ಪಕ್ಷದ ಹೈಕಮಾಂಡ್ ನನಗೆ ಕರೆ ಮಾಡಿಲ್ಲ. ಅವರಿಂದ ಕರೆ ಬಂದಿದ್ದರೆ ನಾನೂ ಕೂಡ ಹೋಗುತ್ತಿದ್ದ ಎಂದು ಹೇಳಿದರು. ಬೆಂಗಳೂರು ಕಾಲ್ತುಳಿತ ದುರಂತ ಕುರಿತು ನಿನ್ನೆ ಸಭೆ ನಡೆಸಲಾಗಿತ್ತು. ನ್ಯಾಯಾಲಯಕ್ಕೆ ಸರ್ಕಾರ ವರದಿ ಸಲ್ಲಿಸಬೇಕಿದ್ದು, ಸರ್ಕಾರದ ಪರವಾಗಿ ಯಾವೆಲ್ಲಾ ಮಾಹಿತಿ ನೀಡಬೇಕೆಂಬುದನ್ನು ಚರ್ಚಿಸಲಾಗಿದೆ ಎಂದು ತಿಳಿಸಿದರು.