
ತುಮಕೂರು: ಕಂಟೇನರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ನಂದಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದೆ. ಅಪಘಾತದಲ್ಲಿ ರಾಜೇಶ್ (25) ದನಂಜಯ್ (27), ಹಾಗೂ ಧನುಷ್ (23) ಮೃತಪಟ್ಟಿದ್ದಾರೆ..
ಬಂಕ್ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಸವಾರರು ಮೃತಪಟ್ಟಿದ್ದಾರೆ. ಈ ಮೂವರು ದಾಬಸಪೇಟೆಯ ಎಂ.ಇ. ಸೋಲಾರ್ ಪ್ಲಾಂಟ್ ನಲ್ಲಿ ವಾಚ್ ಮೆನ್ ಆಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಪಾಳಿಯ ಕೆಲಸ ಮುಗಿಸಿ ತುಮಕೂರು ಕಡೆ ಬರುವಾಗ ಈ ದುರಂತ ಸಂಭವಿಸಿದೆ. ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಎಸ್ ಪಿ ಅಶೋಕ್ ವೆಂಕಟ್, ಎಎಸ್ ಪಿ ಗೋಪಾಲ್, ಡಿವೈಎಸ್ಪಿ ಚಂದ್ರಶೇಖರ್, ಸಿಪಿಐ ರಾಮ್ ಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.