
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಮರ ಬಿದ್ದ ಪರಿಣಾಮ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿಯ ಬಾಡಗ ಬಾಣಂಗಾಲ ಗ್ರಾಮದ ಜನತಾ ಕಾಲೋನಿ ನಿವಾಸಿ ಪಿ.ಸಿ. ವಿಷ್ಣು ಬೆಳ್ಳಿಯಪ್ಪ (65) ಅವರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ವಿಷ್ಣು ಬೆಳ್ಳಿಯಪ್ಪ ಅವರು ಮನೆಯಿಂದ ಹೊರಬರುತ್ತಿದ್ದಂತೆ ಮರ ಅವರ ಮೇಲೆ ಬಿದ್ದಿದೆ.
ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.. ಸ್ಥಳಕ್ಕೆ ಗ್ರೇಡ್ 2 ತಹಶೀಲ್ದಾರರು, ಕಂದಾಯ ಪರಿವೀಕ್ಷಕರು ಹಾಗೂ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಇನ್ನು ಕೊಡಗು ಜಿಲ್ಲೆಯಲ್ಲಿ ಗಾಳಿಯ ವೇಗ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಎಲ್ಲೆಂದರಲ್ಲಿ ಮರಗಳು ಬುಡಮೇಲಾಗುತ್ತಿದ್ದು ಆಂತಕ ಮೂಡಿಸಿದೆ. ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಮರ ಬಿದು ಮೃತಪಟ್ಟಿರುವ ಸಂಖ್ಯೆ ಎರಡಕ್ಕೇರಿದೆ.