
ಈ ಸಲ ಕಪ್ ನಮ್ದೆ ಟು ಈ ಸಲ ಕಪ್ ನಮ್ದು ಆಗಿದೆ. ಕಳೆದ 18 ವರ್ಷಗಳಿಂದ ಆರ್ಸಿಬಿ ಅಭಿಮಾನಿಗಳು ಕಾಣುತ್ತಿದ್ದ ಕನಸು ನಿನ್ನೆ ನನಸಾಗಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಡೆದಿದ್ದ ಫೈನಲ್ ಪಂದ್ಯದಲ್ಲಿ ಬೆಂಗಳೂರು ತಂಡ 6 ರನ್ಗಳಿಂದ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿದೆ.
ಇನ್ನು ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಮಣಿಸಿ ಕಪ್ ಗೆದ್ದ ಆರ್ಸಿಬಿ ತಂಡದ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಆರ್ಸಿಬಿ ತಂಡವನ್ನು ನಾವು ಗೌರವಿಸಬೇಕು. ಯಾವ ರೀತಿ ಅವರನ್ನು ಗೌರವಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಟ್ರಾಫಿಕ್ಗೂ ಸಮಸ್ಯೆ ಆಗಬಾರದು, ಸಾಕಷ್ಟು ಯುವಕರು ಭಾಗವಹಿಸುತ್ತಾರೆ ಎಂದರು. ಅವರು ಶೆಡ್ಯೂಲ್ ಹಾಕಿಕೊಳ್ಳುತ್ತಾರೆ. ಆದರೆ ಕಂಟ್ರೋಲ್ ಮಾಡೋದು ನಾವು. ಗೃಹ ಸಚಿವರು, ಪೊಲೀಸ್ ಕಮೀಷನರ್ ಎಲ್ಲಾ ಕೂತು ಮಾತನಾಡಿ ಈ ಬಗ್ಗೆ ನಿರ್ಧಾರ ಮಾಡುತ್ತಾರೆ. ನಾನು ಕೂಡ ಸಂಪೂರ್ಣ ಮ್ಯಾಚ್ ನೋಡಿದ್ದೇನೆ. ಆರ್ಸಿಬಿ ಟೀಂ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರಿಗೆ ಸನ್ಮಾನ ಮಾಡುವ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ಹೇಳಿದ್ದಾರೆ..