
ಛತ್ತೀಸ್ಗಡದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ಇಟ್ಟಿದ್ದ ಐಇಡಿ (ಸುಧಾರಿತ ಸ್ಪೋಟಕ ಸಾಧನ) ಸ್ಫೋಟದಲ್ಲಿ ಕೊಂಟಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಾವನ್ನಪ್ಪಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಕಾಶ್ ರಾವ್ ಗಿರ್ಪುಂಜೆ ಅವರು ಸಾವನ್ನಪ್ಪಿದ್ದು, ಕೊಂಟಾ-ಎರ್ರಾಬೋರ್ ರಸ್ತೆಯ ದೋಂದ್ರಾ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗಳಾಗಿವೆ. ಪ್ರಾಥಮಿಕ ಚಿಕಿತ್ಸೆಗಾಗಿ ಕೊಂಟಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.
ಕೊಂಟಾದಲ್ಲಿ ನಕ್ಸಲರೇ ಪೊಲೀಸರನ್ನ ಟ್ರ್ಯಾಪ್ ಮಾಡಿದ್ದಾರೆ. ಮೊದಲು ಸುಳ್ಳು ಸುದ್ದಿಯೊಂದನ್ನ ಹಬ್ಬಿಸಿದ್ದಾರೆ, ಇದನ್ನ ನಂಬಿ ಪೊಲೀಸರ ತಂಡ ಹೊರಕೆ ಬರ್ತಿದ್ದಂತೆ ಐಇಡಿ ಸ್ಫೋಟಗೊಂಡಿದೆ. ಈ ವೇಳೆ ಗಿರಿಪುಂಜೆ ಜೊತೆಗೆ ಇತರ ಸಿಬ್ಬಂದಿ ಸಹ ಗಾಯಗೊಂಡಿದ್ದರು. ಎಲ್ಲರನ್ನು ಚಿಕಿತ್ಸೆಗಾಗಿ ಕೊಂಟಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವವಾಗಿದ್ದ ಎಎಸ್ಪಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
ಜೂನ್ 10ರಂದು ಸಿಪಿಐ ಕರೆ ನೀಡಿದ್ದ ಭಾರತ್ ಬಂದ್ಗೆ ಮುಂಚಿತವಾಗಿ ಸಂಭಾವ್ಯ ನಕ್ಸಲ್ ಚಟುವಟಿಕೆ ತಡೆಗಟ್ಟುವ ಕರ್ತವ್ಯದಲ್ಲಿ ಗಿರಿಪುಂಜೆ ನಿರತರಾಗಿದ್ದರು. ಎಎಸ್ಪಿ ಸಾವಿಗೆ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಕಂಬನಿ ಮಿಡಿದಿದ್ದಾರೆ.