
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದು. ಕಾಲ್ತುಳಿತ ಘಟನೆಯ ಜವಬ್ದಾರಿಯನ್ನ ಸಿಎಂ, ಡಿಸಿಎಂ, ಗೃಹ ಸಚಿವರು ತೆಗೆದುಕೊಳ್ಬೇಕು. ಇದರಲ್ಲಿ ಮೂವರದ್ದೂ ತಪ್ಪಿದೆ, ಪಂದ್ಯ ಮುಗಿದ ಮಾರನೇ ದಿನವೇ ಸನ್ಮಾನ ಮಾಡಬೇಕಾದ ಅವಶ್ಯಕತೆ ಇತ್ತಾ. ಮಂತ್ರಿಗಳಿಗೆ ನೈತಿಕತೆ ಅನ್ನೋದು ಇದ್ದರೆ ರಾಜೀನಾಮೆ ಕೊಡಬೇಕು ಎಂದು ಹೇಳಿದ್ದರು.
ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಹೆಚ್ಡಿಕೆ ರಾಜಕಾರಣಿಗಳದ್ದೇ ತಲೆದಂಡ ಆಗಬೇಕಿದೆ. ನಾವು ರಾಜಕಾರಣಿಗಳು ಭಂಡರು ಅನ್ನೋದನ್ನ ಹಲವಾರು ರೀತಿಯಲ್ಲಿ ತೋರಿಸಿಕೊಂಡಿದ್ದೇವೆ. ಅವರಿಂದ ಅದನ್ನು ನಿರೀಕ್ಷೆ ಮಾಡೋಕೆ ಆಗಲ್ಲ. ಆದ್ರೆ ನಾವು ವಿರೋಧ ಪಕ್ಷದಲ್ಲಿ ಇದ್ದುಕೊಂಡು ಡಿಮ್ಯಾಂಡ್ ಮಾಡ್ತೀವಿ. ನಮಗೆ ಹೆಣದ ಮೇಲೆ ರಾಜಕೀಯ ಮಾಡೋ ದುರ್ಗತಿ ಇನ್ನು ಬಂದಿಲ್ಲ ಎಂದು ಹೇಳಿದರು. ಇನ್ನು ಇದೇ ವೇಳೆ, ಗೋವಿಂದರಾಜ್ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಇದೇ ವೇಳೆ, ಪೊಲೀಸ್ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಅಂತ ಐವರನ್ನು ತರಾತುರಿಯಲ್ಲಿ ಅಮಾನತು ಮಾಡಿದ್ದು ಸರಿಯಲ್ಲ. ಅಮಾನತು ಅವಶ್ಯಕತೆ ಇರಲಿಲ್ಲ. ಸರ್ಕಾರ ಈ ರೀತಿ ತೀರ್ಮಾನ ಮಾಡಿದ್ರೆ ಅಧಿಕಾರಿಗಳು ಕೆಲಸ ಮಾಡೋಕೆ ಆಗುವುದಿಲ್ಲ ಎಂದಿದ್ದಾರೆ.