
ಬೆಂಗಳೂರು: ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಕಂದಮ್ಮ ಬಲಿಯಾಗಿರುವ ಘಟನೆಗೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಪರಮೇಶ್ವರ್ ಅವರು ಪೊಲೀಸರು ನಿನ್ನೆ ಮಾನವೀಯತೆ ತೋರಲಿಲ್ಲ. ಪೊಲೀಸರು ಹೀಗೆ ಮಾಡಬಾರದು. ತಪಾಸಣೆ ನಡೆಸಲು ಅದರದ್ದೇ ಆದ ಒಂದು ಪದ್ಧತಿ ಇದೆ. ಅದನ್ನು ಪೊಲೀಸರು ಅನುಸರಿಸಬೇಕು ಎಂದು ಪರಮೇಶ್ವರ್ ಖಡಕ್ ಸೂಚನೆ ನೀಡಿದರು. ಮಂಡ್ಯದಲ್ಲಿ ಘಟನೆ ತಲೆತಗ್ಗಿಸುವಂಥದ್ದು. ಇಂಥ ಘಟನೆಗಳು ಮುಂದೆ ಆಗದಂತೆ ಕ್ರಮವಹಿಸುತ್ತೇವೆ. ಘಟನೆಗೆ ಕಾರಣರಾದ ಮೂವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದರು.
ಮಂಡ್ಯ ಘಟನೆ ತಲೆತಗ್ಗಿಸುವಂಥದ್ದು. ಇಂಥ ಘಟನೆಗಳು ಮುಂದೆ ಆಗದಂತೆ ಕ್ರಮವಹಿಸುತ್ತೇವೆ. ಘಟನೆಗೆ ಕಾರಣರಾದ ಮೂವರನ್ನು ಅಮಾನತು ಮಾಡಲಾಗಿದೆ. ಮತ್ತೆ ಇಂತಹ ಘಟನೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಇವತ್ತು ಸಭೆ ಕರೆದಿದ್ದೇನೆ, ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ವಾಹನ ಸವಾರರು ಸ್ಪೀಡಾಗಿ ಬರ್ತಿರ್ತಾರೆ, ಆಗ ಹೋಗಿ ತಡೆಯುವ ಕೆಲಸ ಪೊಲೀಸರು ಮಾಡ್ತಾರೆ. ಇದರಿಂದ ಸವಾರರು ವಿಚಲಿತರಾಗುತ್ತಾರೆ. ಈ ವಿಚಾರವಾಗಿ ಇಂದಿನ ಸಭೆಯಲ್ಲಿ ಚರ್ಚೆ ಮಾಡಿ ಸರಿಯಾದ ಸೂಚನೆ ಕೊಡುತ್ತೇವೆ ಎಂದು ಅವರು ಹೇಳಿದರು.