ಬೆಂಗಳೂರುಕರ್ನಾಟಕದೇಶಸುದ್ದಿ

ಜಮೀನಿಗೆ ವ್ಯಾಲ್ಯೂ ಬರಬೇಕು ಅದಕ್ಕೆ ಹೆಸರು ಬದಲಾವಣೆ ಮಾಡಿದ್ದಾರೆ- ಶೋಭಾ ಕರಂದ್ಲಾಜೆ

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿರುವ ವಿಚಾರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಸಿದ್ದಾರೆ..

ಸುಳ್ಯ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿರುವ ವಿಚಾರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಸಿದ್ದಾರೆ.. ಬೆಂಗಳೂರು ಅನ್ನುವ ಪದದಲ್ಲಿ ಲ್ಯಾಂಡ್ ಮಾಫಿಯಾ ಇದೆ. ರಾಮನಗರ ಹೆಸರು ತೆಗೆದು, ಬೆಂಗಳೂರು ಸೇರಿಸಿರುವುದೇ ಲ್ಯಾಂಡ್ ಮಾಫಿಯಾ ಕಾರಣಕ್ಕಾಗಿ ಎಂದು ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಸುಳ್ಯದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಸುತ್ತಮುತ್ತ ಯಾರು ಲ್ಯಾಂಡ್ ಮಾಫಿಯಾ ನಡೆಸುತ್ತಿದ್ದಾರೆ ಅವರಿಗೆ ರಾಮನಗರ ಹೆಸರು ಬೇಕಾಗಿಲ್ಲ. ಅವರಿಗೆ ಬೆಂಗಳೂರು ಹೆಸರು ಬೇಕು. ಅವರ ಜಮೀನಿಗೆ ವ್ಯಾಲ್ಯೂ ಬರಬೇಕು. ಈ ಕಾರಣಕ್ಕಾಗಿ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಲಾಗಿದೆ. ಲ್ಯಾಂಡ್ ಮಾಫಿಯಾದ ಶಕ್ತಿಗಳು, ದೊಡ್ಡ ದೊಡ್ಡ ಕುಳಗಳು ಇವತ್ತು ರಾಮನಗರ ಹೆಸರು ತೆಗೆದು ಬೆಂಗಳೂರು ಎಂಬ ಹೆಸರು ಇಡುತ್ತಿದ್ದಾರೆ ಇದರ ಹಿಂದೆ ಲ್ಯಾಂಡ್ ಮಾಫಿಯಾ ಇದೆ. ಇತರ ಹಿಂದೆ ಇರುವುದು ರೈತರ ಜಮೀನು ಕಿತ್ತುಕೊಂಡು, ಬೇರೆಯವರಿಗೆ ಕೊಡುವಂತಹದ್ದು, ಲೇಔಟ್ ಮಾಡುವಂತಹದ್ದು, ಇಂಡಸ್ಟ್ರೀಸ್ ಗಳಿಗೆ ಕೊಡುವ ದೊಡ್ಡ ಶಕ್ತಿ, ಷಡ್ಯಂತ್ರ ಇದೆ. ಆದ್ದರಿಂದ ರಾಮನಗರ ಹೆಸರು ಹಾಗಯೇ ಉಳಿದ ಬೇಕು ಎಂದು ನಾನು ಆಗ್ರಹಿಸುತ್ತೇನೆ ಎಂದು ಅವರು ಒತ್ತಾಯಿಸಿದರು. ಆ ಜಿಲ್ಲೆಯವರು ಇದಕ್ಕೆ ಶಕ್ತಿ ನೀಡಬೇಕು ಎಂದು ಆ ಜಿಲ್ಲೆಯ ಜನರಲ್ಲಿ ಆಗ್ರಹ ಮಾಡುತ್ತೇನೆ ಎಂದರು.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker