
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಕೆಲ ಸಂಸದರು, ಶಾಸಕರ ಮನೆ ಮೇಲೆ ಇ.ಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಬಳ್ಳಾರಿಯ ಮೂವರು ಶಾಸಕರು, ಓರ್ವ ಸಂಸದನಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಬೆಳ್ಳಂಬೆಳ್ಳಗೆ ಶಾಕ್ ನೀಡಿದೆ. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ, ಸಂಡೂರಲ್ಲಿರುವ ಸಂಸದ ಇ.ತುಕಾರಾಂ ಮನೆ ಮೇಲೆ ಇ.ಡಿ ರೇಡ್ ಮಾಡಿದೆ.
ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆ ಶೋಧ ನಡೆದಿದೆ. ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಜೊತೆಗೆ ಬಳ್ಳಾರಿಯ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಗಣೇಶ್, ಕೊಡ್ಲಿಗಿ ಶಾಸಕ ಶ್ರೀನಿವಾಸ್ ಮನೆ ಮೇಲೂ ಇ.ಡಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲಿಸುತ್ತಿದೆ.
ಇನ್ನು ಬೆಂಗಳೂರಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೂ ಜಾರಿ ನಿರ್ದೇಶನಾಲಯ ಶಾಕ್ ನೀಡಿದೆ. ಶಾಸಕರ ಭವನದ ನಾಗೇಂದ್ರ ಕಚೇರಿ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ ವಾಲ್ಮಿಕಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅರೆಸ್ಟ್ ಆಗಿದ್ದರು.